ಮೂರು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪುರುಷ ಮೀನುಗಾರರಿಗೂ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಸಾಲ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವಿಶ್ವ ಮೀನುಗಾರಿಕೆ ದಿನ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀನುಗಾರರ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮತ್ಸ್ಯಾಶ್ರಯ ಯೋಜನೆಯಡಿ ಮುಂದಿನ ವರ್ಷದಿಂದ ಮನೆ ನಿರ್ಮಿಸಿ ಕೊಡುವ ಕಾರ್ಯಕ್ಕೆ ಹಣ ಮೀಸಲಿಡುವುದಾಗಿ ತಿಳಿಸಿದ್ದಾರೆ.

ಮಹಿಳಾ ಮೀನುಗಾರರಿಗೆ ನೀಡುತ್ತಿರುವಂತೆ ಪುರುಷ ಮೀನುಗಾರರಿಗೂ ಮೂರು ಲಕ್ಷ ಬಡ್ಡಿ ರಹಿತ ಸಾಲ ನೀಡುವಂತೆ ಒತ್ತಾಯವಿದೆ. ಮೀನುಗಾರಿಕೆ ವಿವಿ ಸ್ಥಾಪನೆ, ಕೆರೆ ಗುತ್ತಿಗೆ ಅವಧಿ ವಿಸ್ತರಣೆ ಬಗ್ಗೆ ಪರಿಶೀಲನೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read