ಲಾಡ್ಜ್ ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದ ವ್ಯಕ್ತಿ ದುಡುಕಿನ ನಿರ್ಧಾರ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಮೂಲದ ಪ್ರಸನ್ನ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಬಾಳೆಬೈಲಿನಲ್ಲಿರುವ ಲಾಡ್ಜ್ ವೊಂದರಲ್ಲಿ ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದ ಪ್ರಸನ್ನ ಶೆಟ್ಟಿ ಕೊಠಡಿಯ ಬಾಗಿಲು ತೆರೆಯದಿದ್ದಾಗ ರೂಮ್ ಸಿಬ್ಬಂದಿ ಪರಿಶೀಲಿಸಿದ್ದಾರೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ಪ್ರಸನ್ನ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read