BREAKING: ದಾಳಿ ವೇಳೆ ಅಧಿಕಾರಿ ಬಳಿ ಕಂತೆ ಕಂತೆ ಹಣ ಪತ್ತೆ: ಎಣಿಕೆಗೆ ಯಂತ್ರ ತರಿಸಿಕೊಂಡ ಲೋಕಾಯುಕ್ತ ಪೊಲೀಸರು

ಚಿಕ್ಕಬಳ್ಳಾಪುರ: ಲೋಕಾಯುಕ್ತ ದಾಳಿಯ ವೇಳೆ ಅಧಿಕಾರಿಯ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಎಣಿಕೆಗಾಗಿ ಯಂತ್ರ ತರಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕು ಕೃಷಿ ಅಧಿಕಾರಿ ಶಂಕರಯ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರದ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ದಾಳಿ ಮಾಡಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಗುತ್ತಿಗೆದಾರ ಮಂಜುನಾಥ್ ಬಳಿ 3 ಲಕ್ಷ ರಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಅಧಿಕಾರಿ ಶಂಖರಯ್ಯ ಬ್ಯಾಗ್ ನಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಹಣ ಎಣಿಸಲು ಅಧಿಕಾರಿಗಳು ಮಿಷನ್ ತರಿಸಿಕೊಂಡಿದ್ದಾರೆ.

ಒಂದು ಲಕ್ಷ ರೂ. ಲಂಚ ಮುಂಗಡವಾಗಿ ಪಡೆದಿದ್ದ ಶಂಕರಯ್ಯ, ನಂತರ 2 ಲಕ್ಷ ರೂಪಾಯಿ ಹಣವನ್ನು ಲಂಚವಾಗಿ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ರೇಡ್ ಮಾಡಿದ್ದಾರೆ.

ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕಚೇರಿ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read