ಲಂಚ ಸ್ವೀಕರಿಸಿ ಪರಾರಿಯಾಗ್ತಿದ್ದ ಇಂಜಿನಿಯರ್ ಗಳನ್ನು ಅಟ್ಟಾಡಿಸಿಕೊಂಡು ಹೋಗಿ ಹಿಡಿದ ಲೋಕಾಯುಕ್ತ ಪೊಲೀಸರು

ಚಾಮರಾಜನಗರ: ಚಾಮರಾಜನಗರದಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕೋಪಯೋಗಿ ಇಲಾಖೆಯ ಎಇಇ ಕೆಂಪರಾಜು ಮತ್ತು ಎಇ ಮಧುಸೂಧನ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ರಸ್ತೆ ಕಾಮಗಾರಿ ಹಣ ಬಿಡುಗಡೆ ಮಾಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದ ಬಳಿ ಲಂಚ ಸ್ವೀಕರಿಸುವಾಗ ದಾಳಿ ಮಾಡಲಾಗಿದೆ.

ಪಿ.ಡಬ್ಲ್ಯೂ.ಡಿ. ಇಂಜಿನಿಯರ್ ಗಳು 30 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದರು. ದಾಳಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದವರನ್ನು ಲೋಕಾಯುಕ್ತರು ಅಟ್ಟಾಡಿಸಿಕೊಂಡು ಹೋಗಿ ಹಿಡಿದಿದ್ದಾರೆ. ಲೋಕಾಯುಕ್ತ ಡಿ.ವೈ.ಎಸ್.ಪಿ. ಮ್ಯಾಥ್ಯೂ ಥಾಮಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read