ದಾವಣಗೆರೆ: 20 ಸಾವಿರ ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಎಇ ಲೋಕಾಯುಕ್ತ ( Lokayukta ) ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಎಇ ಅಬ್ದುಲ್ ಹಮೀದ್ ಕಾಮಗಾರಿಯೊಂದಕ್ಕೆ ಅನುಮತಿ ನೀಡಲು 20 ಸಾವಿರ ಲಂಚಕ್ಕೆ ಬೇಡಿಯೊಡ್ಡಿದ್ದರು, ಅಂತೆಯೇ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಬ್ದುಲ್ ಹಮೀದ್ ರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
You Might Also Like
TAGGED:Lokayukta raid