ಮೈಸೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಹಂಚಿಪುರ ಗ್ರಾಮದ ಚಿಕ್ಕಸ್ವಾಮಿ (45) ಹಾಗೂ ಪತ್ನಿ ರೂಪಾ (38) ಹಾಗೂ ಕಣೇನೂರು ಗ್ರಾಮದ ಚನ್ನಮಲ್ಲಮ್ಮ (55) ಮೃತ ದುರ್ದೈವಿಗಳು.
ಲಾರ್ ಬೈಕ್ ಗೆ ಗುದ್ದಿದ ಪರಿಣಾಮ ಮೂವರು ರಸ್ತೆಯ ಮೇಲೆ ಬಿದ್ದಿದ್ದಾರೆ. ಲಾರಿಯ ಚಕ್ರ ಮೂವರ ಮೇಲೆ ಹರಿದು ಹೋಗಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಅಪಘಾತ ಮಾಡಿರುವ ಲಾರಿ ತಮಿಳುನಾಡು ಮೂಲದ್ದಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.