BREAKING NEWS: ಲಾರಿ-ಟೂರಿಸ್ಟ್ ಬಸ್ ಡಿಕ್ಕಿ: 17 ಪ್ರವಾಸಿಗರಿಗೆ ಗಂಭೀರ ಗಾಯ

ಉಡುಪಿ: ಲಾರಿ ಹಾಗೂ ಟೂರಿಸ್ಟ್ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 17 ಪ್ರವಾಸಿಗರು ಗಾಯಗೊಂಡಿರುವ ಘಟನೆ ಉಡುಪಿ ತಾಲೂಕಿನ ಉದ್ಯಾವರ ಗ್ರಾಮದಲ್ಲಿ ನಡೆದಿದೆ.

ಉದ್ಯಾವರ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತಸಂಭವಿಸಿದೆ. ಕೊಲ್ಲೂರು ದೇವಾಲಯಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್, ಮುಂಜಾನೆ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಪ್ರವಾಸಿಗರ ಬಸ್ ನುಜ್ಜುಗುಜ್ಜಾಗಿದೆ.

ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read