ಚಾಮರಾಜನಗರ: ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ.
ಉಡುಪಿ ಮೂಲದ ಲಾರಿ ಚಾಲಕ ಅನಂತ ಪದ್ಮನಾಭ (70) ಮೃತ ದುರ್ದೈವಿ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಗರ, ನಿಂಗರಾಜ ನಾಯಕ, ಮಲ್ಲೇಶ್ ಎಂದು ಗುರುತಿಸಲಾಗಿದೆ.
ಗಾಯಾಳುಗಳಿಗೆ ಕೊಳ್ಳೇಗಾಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.