ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಿರ್ದೇಶಕ, ನಿರ್ಮಾಪಕರ ಗಲಾಟೆ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರ ನಿರ್ದೇಶಕ, ನಿರ್ಮಾಪಕರ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಿರ್ಮಾಪಕ ಚಂದ್ರು ಅಲಿಯಾಸ್ ಕಡ್ಡಿಪುಡಿ ಚಂದ್ರು ವಿರುದ್ಧ ದೂರು ನೀಡಲಾಗಿದೆ.

ಚಿತ್ರ ನಿರ್ದೇಶಕ ಪಿ.ಸಿ. ಶೇಖರ್ ದೂರು ದಾಖಲಿಸಿದ್ದಾರೆ. ಕಡ್ಡಿಪುಡಿ ಚಂದ್ರು ವಿರುದ್ಧ ಹಣ ನೀಡದೆ ವಂಚನೆ ಹಾಗೂ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಲವ್ ಬರ್ಡ್ಸ್’ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ಹಣಕಾಸಿನ ವಿಚಾರಕ್ಕೆ ಮನಸ್ತಾಪ ಉಂಟಾಗಿದ್ದು, ತಮಗೆ ನೀಡಬೇಕಿದ್ದ ಸಂಭಾವನೆಯನ್ನು ನಿರ್ಮಾಪಕರು ನೀಡಿಲ್ಲ. ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ‘ಲವ್ ಬರ್ಡ್ಸ್’ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಟಿಸಿದ್ದರು. ಕಡ್ಡಿಪುಡಿ ಚಂದ್ರು ನಿರ್ಮಾಣದಲ್ಲಿ ಪಿ.ಸಿ. ಶೇಖರ್ ನಿರ್ದೇಶನದಲ್ಲಿ ಚಿತ್ರ ನಿರ್ಮಾಣವಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read