BREAKING : ಆಳ್ವಾಸ್ ಕಾಲೇಜಿನಲ್ಲಿ ಹಾಡಹಗಲೇ ಶಾಕಿಂಗ್ ಘಟನೆ ; ‘PUC’ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಯುವಕ..!

ದಕ್ಷಿಣ ಕನ್ನಡ ಜಿಲ್ಲೆ : ಪ್ರೇಮ ವೈಫಲ್ಯದಿಂದ ಯುವಕನೋರ್ವ ಪಿಯುಸಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ.

ತುಮಕೂರು ಮೂಲದ ಮಂಜುನಾಥ್ ಈ ಕೃತ್ಯ ಎಸಗಿದ್ದು, ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದೆ.
ಮಂಜುನಾಥ್ ಆಳ್ವಾಸ್ ಕಾಲೇಜಿನ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದನು. ಇದಕ್ಕೆ ಆಕೆ ಒಪ್ಪದ ಹಿನ್ನೆಲೆ ಕತ್ತರಿಯಿಂದ ಹೊಟ್ಟೆಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಯತ್ನ ಆರೋಪದಡಿ ಪೊಲೀಸರು ಮಂಜುನಾಥ್ ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read