ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಕಲಬುರಗಿ: ಪ್ರೀತಿ ವಿಚಾರಕ್ಕೆ ಯುವಕನ ಕೊಲೆಗೈದ ನಾಲ್ವರು ಆರೋಗ್ಯಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಅಭಿಷೇಕ್(18) ಕೊಲೆಯಾದ ಯುವಕ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಸಂಬಂಧಿಕರಾದ ಅನಿಲ್ ರಾಥೋಡ್, ಸಂತೋಷ್, ಸಾಗರ್ ಜಾಧವ್, ಹೇಮಂತ್ ರಾಥೋಡ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಗಂಗಾನಗರ ನಿವಾಸಿಯಾಗಿದ್ದ ಅಭಿಷೇಕ್, ಅಪ್ರಾಪ್ತ ಬಾಲಕಿ ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಾಟ್ಸಾಪ್ ಚಾಟಿಂಗ್, ಸಂಭಾಷಣೆ ಕೂಡ ಮಾಡುತ್ತಿದ್ದರು. ಬಾಲಕಿಯ ಕುಟುಂಬದವರಿಗೆ ವಿಷಯ ತಿಳಿದು ಎಚ್ಚರಿಕೆ ನೀಡಿದ್ದರು.

ಸೋಮವಾರ ರಾತ್ರಿ ಬಾಲಕಿ ಫೋನ್ ಮಾಡಿ ಮನೆಗೆ ಕರೆಸಿಕೊಂಡಿದ್ದಾಳೆ. ಮನೆಗೆ ಹೋದ ಅಭಿಷೇಕ್ ಕುಟುಂಬದವರ ಕೈಗೆ ಸಿಕ್ಕಿಬಿದ್ದಿದ್ದು, ಕಟ್ಟಿಗೆ, ಕಬ್ಬಿಣದ ರಾಡ್ ನಿಂದ ತೀವ್ರವಾಗಿ ಥಳಿಸಲಾಗಿದೆ. ಗಂಭೀರವಾಗಿ ಹಲ್ಲೆಗೊಳಗಾದ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ವಿಶ್ವವಿದ್ಯಾಲಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read