ಮಂಗಳೂರು: ವಿವಾಹಿತ ಪ್ರೇಮಿಗಳಿಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ತೆಂಕಮಿಜಾರು ಬಳಿ ನಡೆದಿದೆ.
ಬುಡಗಮಿಜಾರು ಗ್ರಾಮದ ವಿವಾಹಿತೆ 29 ವರ್ಷದ ನಮೀಕ್ಷಾ ಶೆಟ್ಟಿ, ಆಕೆಯ ಪ್ರಿಯಕರ ನಿಡೋಡಿಯಲ್ಲಿ ವಾಸವಾಗಿದ್ದ ಬಾಗಲಕೋಟೆ ಮೂಲದ ಚಾಲಕ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ನಮೀಕ್ಷಾಗೆ ಮದುವೆಯಾಗಿದ್ದು, ಇಬ್ಬರು ಪುಟ್ಟ ಗಂಡು ಮಕ್ಕಳಿದ್ದಾರೆ. ಅವರ ಪತಿ ಪುಣೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮೂಲತಃ ಬಾಗಲಕೋಟೆ ನಿವಾಸಿಯಾಗಿರುವ ಪ್ರಶಾಂತ್ ಗೂ ಬಾಗಲಕೋಟೆಯಲ್ಲಿ ಮದುವೆಯಾಗಿದೆ ಎಂದು ಹೇಳಲಾಗಿದೆ.
ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ಮೂಲಕ ಪ್ರಶಾಂತ್ ಪರಿಚಯವಾಗಿದ್ದು, ಪ್ರೇಮ ಸಂಬಂಧಕ್ಕೆ ತಿರುಗಿತ್ತು. ಕಾರಣಾಂತರದಿಂದ ಇಬ್ಬರ ಮಧ್ಯೆ ಜಗಳವಾಗಿ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಮೂಡಬಿದರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.