ಬೆಂಗಳೂರಲ್ಲಿ ಹುಚ್ಚುನಾಯಿ ದಾಳಿ : ಬಾಲಕರು ಸೇರಿ 7 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಬೆಂಗಳೂರಲ್ಲಿ ಹುಚ್ಚುನಾಯಿಗಳ ಹಾವಳಿ ಜನರ ನಿದ್ದೆಗೆಡಿಸಿದೆ. ಹುಚ್ಚುನಾಯಿಗಳ ದಾಳಿಗೆ ಬಾಲಕರು ಸೇರಿ 7 ಮಂದಿ ಗಾಯಗೊಂಡಿದ್ದಾರೆ.

ಯಲಹಂಕದ ಕೊಂಡಪ್ಪ ಲೇಔಟ್ ಬಳಿ ರಸ್ತೆಯಲ್ಲಿ ಹೋಗುವವರ ಮೇಲೆ ಹುಚ್ಚುನಾಯಿಯೊಂದು ದಾಳಿ ಮಾಡಿ ಕಚ್ಚುತ್ತಿದ್ದು, ಜನರನ್ನು ಭಯಗೊಳಿಸಿದೆ. ಹುಚ್ಚುನಾಯಿ ಕಚ್ಚಿ ಏಳು ಜನರು ಗಾಯಗೊಂಡಿದ್ದು, ಯಲಹಂಕ ಸರ್ಕಾರಿ ಆಸ್ಪತ್ರೆ ಸೇರಿದ್ದಾರೆ. ಅದರಲ್ಲಿ ಬಾಲಕಿ ಹಾಗೂ ಬಾಲಕಿಗೆ ಗಂಭೀರ ಗಾಯಗಳಾಗಿದೆ.

ಸಂಜೆ ವಾಕಿಂಗ್ ಹೋಗುವವರ ಮೇಲೆ ಹುಚ್ಚುನಾಯಿ ದಾಳಿ ನಡೆಸಿದ್ದು, ಸಿಕ್ಕ ಸಿಕ್ಕ ಕಡೆ ದಾಳಿ ನಡೆಸುತ್ತಿರುವ ಹುಚ್ಚು ನಾಯಿಯನ್ನು ಹಿಡಿಯಲು ಸ್ಥಳೀಯರು ಆಗ್ರಹಿಸಿದ್ದಾರೆ. ಹುಚ್ಚು ನಾಯಿಗಳು ಹೆಚ್ಚಾಗಿ ಮಕ್ಕಳನ್ನೇ ಕಚ್ಚುತ್ತಿದ್ದು, ಸ್ಥಳೀಯರು ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read