ಲಂಚ ಪ್ರಕರಣ: ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಸಾಯನಿಕ ಪೂರೈಕೆ ಟೆಂಡರ್ ನೀಡಲು ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ್ ಕುಮಾರ್ ಲಂಚ ಪಡೆಯಲು ಮುಂದಾಗಿದ್ದು ಸಾಬೀತಾಗಿದೆ. ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಈ ಬಗ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ನಿಗಮಕ್ಕೆ ಸಂಬಂಧಿಸಿದಂತೆ 2023ರಲ್ಲಿ 40 ಲಕ್ಷ ರೂಪಾಯಿ ಲಂಚ ಪಡೆದ ಪ್ರಕರಣದ ತನಿಖೆ ನಡೆಸುವಾಗ ಇನ್ನೂ 90 ಲಕ್ಷ ರೂಪಾಯಿ ಲಂಚದ ಹಣ ಪತ್ತೆಯಾಗಿತ್ತು. ಲೋಕಾಯುಕ್ತ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಪ್ರಶಾಂತ್ ಕುಮಾರ್ ಅವರನ್ನು ಮೊದಲ ಆರೋಪಿಯಾಗಿಸಿದ್ದು, ಲಂಚ ನೀಡಿದ ಕಂಪನಿಯ ನೌಕರನನ್ನು ಎರಡನೇ ಆರೋಪಿಯನ್ನಾಗಿಸಲಾಗಿದೆ.

ಟೆಂಡರ್ ಪ್ರಕ್ರಿಯೆಯಲ್ಲಿ ಕಂಪನಿಗೆ ಅನುಕೂಲ ಮಾಡಿಕೊಡಲು 90 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಲಂಚ ಪಡೆದಿರುವುದಕ್ಕೆ ಸಾಕ್ಷ್ಯಗಳು ಲಭ್ಯವಾಗಿವೆ. ವಾಟ್ಸಾಪ್ ನಲ್ಲಿ ಇಬ್ಬರೂ ಚಾಟ್ ಮಾಡಿದ್ದು, ಅದನ್ನು ಡಿಲೀಟ್ ಮಾಡಿದ್ದರು. ರಿಟ್ರಿವ್ ಮಾಡಿ ಸಾಕ್ಷ್ಯ ಸಂಗ್ರಹಿಸಲಾಗಿದೆ. ಪ್ರಶಾಂತ್ ಕುಮಾರ್ ಲಂಚ ಪಡೆಯಲು ಮುಂದಾಗಿದ್ದರು ಎಂಬುದು ಸಾಬೀತಾಗಿದೆ ಎಂದು ಲೋಕಾಯುಕ್ತ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read