ಬೆಂಗಳೂರು: ಸಹ ಕಲಾವಿದೆ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ.
ಷರತ್ತುಬದ್ಧ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿರುವ ಮಡೆನೂರು ಮನು ಆಡಿಯೋ ವರಲ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟರ ಬಗ್ಗೆ ಅಗೌರವವಾಗಿ ಮಾತನಾಡಿದ್ದ ಆಡಿಯೋ ವೈರ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನು, ಆಡಿಯೋ ಮೂಲಕ ನನ್ನ ನಾಶ ಮಾಡಿದ್ದಾರೆ. ಆದರೆ ಆ ಆಡಿಯೋ ನನ್ನದಲ್ಲ ಎಂದಿದ್ದಾರೆ.
ಹಲವು ವರ್ಷಗಳ ಕಾಲ ಜೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದೇನೆ. ನನ್ನ ಕನಸು ಈಡೇರುವಾಗ ಈ ರೀತಿ ಆಗಿದೆ. ನನ್ನ ಪರಿಸ್ಥಿತಿ ಯಾವ ಶತ್ರುಗೂ ಬೇಡ. ನನಗೆ ಈರೀತಿ ಮಾಡಿದ ಎಲ್ಲರಿಗೂ ಒಳ್ಲೆಯದಾಗಲಿ ಎಂದು ಹತಾಶರಾಗಿ ನುಡಿದ್ದಾರೆ.