ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಎದ್ದು ಬಂದು….. ಎಂಬ ಮಾತು ಶಿಕ್ಷಣ ಸಚಿವರಿಗೆ ಅನ್ವಿಸುತ್ತದೆ: ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಕ್ಷೇಪ

ಬೆಂಗಳೂರು: ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದಿರುವ ವಿದ್ಯಾರ್ಥಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆದೇಶಿಸಿರುವ ವಿಚಾರವಾಗಿ ರಾಜ್ಯ ಬಿಜೆಪಿ ಕಿಡಿಕಾರಿದೆ.

ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ ಇದು ಅಕ್ಷರಶಃ ನಮ್ಮ ಅವಿದ್ಯಾವಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅನ್ವಯೀಸುತ್ತದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ.

ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂದು ಮಧು ಬಂಗಾರಪ್ಪ ಅವರೆ ಹಿಂದೊಮ್ಮೆ ಹೇಳಿದ್ದರು. ಅದನ್ನೇ ವಿದ್ಯಾರ್ಥಿಯೊಬ್ಬ ನೆನಪಿಸಿದ ತಕ್ಷಣ, ಆ ವಿದ್ಯಾರ್ಥಿ ಸೇರಿದಂತೆ ಅಲ್ಲಿನ ಶಿಕ್ಷಕರು ಹಾಗೂ ಬಿಇಒ ಮೇಲೆ ಕ್ರಮ ಕೈಗೊಳ್ಳಿ ಎಂದು ಆದೇಶಿಸಿರುವುದು ನಿಜಕ್ಕೂ ಸ್ಟುಪಿಡ್! ಕಾಂಗ್ರೆಸ್ಸಿಗರ ಈರೀತಿಯ ಸರ್ವಾಧಿಕಾರಿ ಧೋರಣೆ ಪ್ರಜಾಪ್ರಭುವತಕ್ಕೆ ಮಾರಕ ಎಂದು ವಾಗ್ದಾಳಿ ನಡೆಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read