ಬಿಜೆಪಿ ಸಮಾವೇಶದಲ್ಲಿ ನಾಯಕರ ಪರ್ಸ್ ಎಗರಿಸಿದ್ದ 13 ಜೇಬುಗಳ್ಳರು ಅರೆಸ್ಟ್

ಮಡಿಕೇರಿ: ಬಿಜೆಪಿ ಸಮಾವೇಶದಲ್ಲಿ ಪಿಕ್ ಪಾಕೆಟ್ ಮಾಡಿದ್ದ 13 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ನೆಲಮಂಗಲ ಮೂಲದ ಜೇಬುಗಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಕಾರು, 12 ಮೊಬೈಲ್, 65,900 ರೂ.ನಗದು ವಶಕ್ಕೆ ಪಡೆಯಲಾಗಿದೆ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ ಸೇರಿ ಹಲವರ ಪರ್ಸ್ ಗಳನ್ನು ಆರೋಪಿಗಳು ಕಳವು ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಯದುವೀರ್ ಪಾಲ್ಗೊಂಡಿದ್ದ ಸಮಾವೇಶದಲ್ಲಿ ನಾಯಕರು, ಮುಖಂಡರು, ಜನರ ಪರ್ಸ್ ಗಳನ್ನು ದೋಚಲಾಗಿತ್ತು. ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read