ಬಸ್ ಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ: ಅಪಘಾತದಲ್ಲಿ 4 ಜನ ಸಾವು: 18 ಮಂದಿ ಗಾಯ

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಭಾನುವಾರ ಬಸ್‌ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ.

ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವಸ್ಥಾನದ ಬಳಿ ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತಾರಾದಿಂದ ಥಾಣೆಯ ಡೊಂಬಿವಿಲಿಗೆ ತೆರಳುತ್ತಿದ್ದ ಖಾಸಗಿ ಪ್ರಯಾಣಿಕರ ಬಸ್ ಸ್ವಾಮಿನಾರಾಯಣ ದೇವಸ್ಥಾನದ ಬಳಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಮೂವರು ಬಸ್ ಪ್ರಯಾಣಿಕರು ಮತ್ತು ಟ್ರಕ್ ಚಾಲಕ ಸಾವನ್ನಪ್ಪಿದ್ದು, 18 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮೇಲ್ನೋಟಕ್ಕೆ ಟ್ರಕ್ ಚಾಲಕನು ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡು ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲಿಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read