BREAKING: ಸೇತುವೆ ಕುಸಿದು ದುರಂತ: 6 ಪ್ರವಾಸಿಗರು ಸಾವು; ನೀರಿನಲ್ಲಿ ಕೊಚ್ಚಿಹೋದ ಹಲವರು

ಮುಂಬೈ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ನಡುವೆ ಸೇತುವೆಯೊಂದು ಕುಸಿದುಬಿದ್ದ ಪರಿಣಾಮ 6 ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಪುಣೆಯ ಕುಂಡಮ್ಲಾದಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಿದ್ದ ಸೇತುವೆ ಕುಸಿದು ಈ ದುರಂತ ಸಂಭವಿಸಿದೆ. ಪುರಾತನ ಕಾಲದ ಸೇತುವೆ ಇದಾಗಿದ್ದು, ಧಾರಾಕಾರವಾಗಿ ಸುರಿದ ಮಳೆಗೆ ಏಕಾಏಕಿ ಸೇತುವೆ ಕುಸಿದು ಬಿದ್ದಿದೆ. 6 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇನ್ನೂ 20-25 ಪ್ರವಾಸಿಗರು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಸದ್ಯ ೬ ಪ್ರವಾಸಿಗರ ಮೃತದೇಹ ನೀರಿಂದ ಹೊರತೆಗೆಯಲಾಗಿದೆ. ಭಾನುವಾರವಾದ್ದರಿಂದ ಅಪಾರ ಸಂಖ್ಯೆಯಲ್ಲಿ ಇಂದ್ರಯಾಣಿ ನದಿ ಸೇತುವೆಗೆ ಬಂದಿದರು. ಈ ವೇಳೆ ದುರಂತ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read