BREAKING: ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋದ ಮಹೇಶ್ ತಿಮರೋಡಿ

ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಕೂಡಿಟ್ಟಿರುವ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಹೋರಾಟಗಾರ ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆಹೋಗಿದ್ದಾರೆ.

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿರುವ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ನಾಳೆ ಅರ್ಜಿ ವಿಚಾರಣೆ ನಡೆಯಲಿದೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿ ವಿರುದ್ಧ 32 ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಎಸಿ ಸ್ಟೆಲ್ಲಾ ವರ್ಗೀಸ್, ಒಂದು ವರ್ಷದ ಅವಧಿಗೆ ತಿಮರೋಡಿಯನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read