ಮೈಲಾರಿ ಹೋಟೆಲ್ ಗೆ ತೆರಳಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಕೆ.ಆರ್. ಎಸ್ ಜಲಾಶಯದಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಿಸುವ ನಿಟ್ಟಿನಲ್ಲಿ ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಲಾರಿ ಹೋಟೆಲ್ ಗೆ ತೆರಳಿ ದೋಸೆ ಸವಿದಿದ್ದಾರೆ.

ಮೈಲಾರಿ ಹೋಟೆಲ್ ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಸಾಮಾನ್ಯ ಜನರಂತೆ ಕುಳಿತು ಬಿಸಿ ಬಿಸಿ ದೋಸೆ ಸವಿದರು. ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದಾಗ ಆಗಾಗ ಇದೇ ಮೈಲಾರಿ ಹೋಟೆಲ್ ನಲ್ಲಿ ಬ್ರೇಕ್ ಫಾಸ್ಟ್ ಮಾಡುತ್ತಾರೆ.

ಸಿಎಂ ಸಿದ್ದರಾಮಯ್ಯ ಜೊತೆ ಸಚಿವ ಚಲುವರಾಯಸ್ವಾಮಿ, ಹಾಗೂ ಸಿಎಂ ಬೆಂಬಲಿಗರು ಕೂಡ ಹೋಟೆಲ್ ನಲ್ಲಿ ದೋಸೆ ಸವಿದಿದ್ದಾರೆ. ಬಳಿಕ ಕೆ.ಆರ್.ಎಸ್ ಡ್ಯಾಂ ಗೆ ತೆರಳಿ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read