ಬೆಂಗಳೂರು: ಸೆಪ್ಟೆಂಬರ್ ನಲ್ಲಿ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೈಕಮಾಂಡ್ ನಿರ್ಧಾರ ಯಾರಿಗೂ ಊಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಹೈಕಮಾಂಡ್ ತೀರ್ಮಾನಗಳನ್ನು ಯಾರೂ ಕೂಡ ಊಹಿಸಲು ಆಗಲ್ಲ. ಏನೇ ನಿರ್ಧಾರ ಕೈಗೊಂಡರೂ ಹೈಕಮಾಂಡ್ ಯೋಚಿಸಿಯೇ ನಿರ್ಧರಿಸುತ್ತದೆ ಎಂದಿದ್ದಾರೆ.
ಮುಂದಿನ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ಕೂಡ ಹೈಕಮಾಂಡ್ ಕೈಲಿದೆ. ಆದರೆ ಯಾರೂ ಕೂಡ ಅನಗತ್ಯವಾಗಿ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಹೇಳಿದರು.