ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಹೃದಯಾಘಾತ : ಯುವಕ ಸಾವು!

ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಘೋರ ದುರಂತವೊಂದು ಸಂಬವಿಸಿದ್ದು, ಗಣಪತಿ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಹೃದಯಾಘಾತವಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗಂಗಾವತಿಯ ಪ್ರಶಾಂತ ನಗರದದಲ್ಲಿ  ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ  ಸುದೀಪ್ ಸಜ್ಜನ್ (30) ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದು, ಕೆಲ ಹೊತ್ತಿನ ಬಳಿಕ ಕುಸಿದು ಬಿದ್ದಿದ್ದಾನೆ. ಕೂಡಲೇ ಯುವಕರು ಡಿಜೆ ಬಂದ್ ಮಾಡಿದ್ದು, ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read