ರೆಸ್ಟೋರೆಂಟ್ ನಲ್ಲಿ ಎಸಿ ಯುನಿಟ್ ಸ್ಫೋಟ: ಓರ್ವ ಸಾವು, ಮತ್ತೊಬ್ಬ ಗಂಭೀರ

ಮುಂಬೈ: ಹವಾನಿಯಂತ್ರಣದ ಹೊರಾಂಗಣ ಘಟಕದಲ್ಲಿ ಸ್ಫೋಟದಿಂದಾಗಿ ಗಾಯಗೊಂಡ 50 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ವೇಳೆ ಭಾನುವಾರ ಮೃತಪಟ್ಟಿದ್ದು, ಅವರ ಸಹೋದ್ಯೋಗಿ ಚಿಂತಾಜನಕರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುವಾರ ಮುಂಜಾನೆ ತಾರಾನಾಥ್ ಮತ್ತು ಸುಜಿತ್ ಪಾಲ್(33) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ 20 ಅಂತಸ್ತಿನ ಕಾರ್ಪೊರೇಟ್ ಕಟ್ಟಡದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಎಸಿ ಹೊರಾಂಗಣ ಘಟಕವನ್ನು ದುರಸ್ತಿ ಮಾಡುತ್ತಿದ್ದಾಗ ಸ್ಪೋಟ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ತಾರಾನಾಥ್ ಅವರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದರೆ, ಪಾಲ್ ಅವರಿಗೆ ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

ಕುರ್ಲಾದ ನಾಗರಿಕ-ಭಾಭಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾರಾನಾಥ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ನಿಧನರಾಗಿದ್ದಾರೆ. ಪಾಲ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read