ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಿದ ಭೂಪ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಮದ್ಯ ಕೊಡಲು ನಿರಾಕರಿಸಿದಕ್ಕೆ ವ್ಯಕ್ತಿಯೊಬ್ಬ ವೈನ್ ಶಾಪ್‌ಗೆ ಬೆಂಕಿ ಹಚ್ಚಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಮಧುರವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧು ಎಂಬ ವ್ಯಕ್ತಿ ವೈನ್ ಶಾಪ್‌ಗೆ ಆಗಮಿಸಿದ ವೇಳೆ ಘಟನೆ ನಡೆದಿದೆ. ಮುಚ್ಚುವ ಸಮಯವಾದ ಕಾರಣ ಅಂಗಡಿ ಸಿಬ್ಬಂದಿ ಮದ್ಯ ನೀಡಲು ನಿರಾಕರಿಸಿದ್ದಾರೆ. ಈ ಘಟನೆ ವ್ಯಕ್ತಿ ಮತ್ತು ಸಿಬ್ಬಂದಿ ನಡುವೆ ವಾಗ್ವಾದಕ್ಕೆ ಕಾರಣವಾಯಿತು, ನಂತರ ಸ್ಥಳದಿಂದ ಹೊರಟು ಹೋದ ಮಧು ಭಾನುವಾರ ಸಂಜೆ ಮತ್ತೆ ಪೆಟ್ರೋಲ್ ಟ್ಯಾಂಕ್‌ನೊಂದಿಗೆ ಅಂಗಡಿಗೆ ಮರಳಿದ್ದಾನೆ. ಅಂಗಡಿಯೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೋತಿನಮಲ್ಲಯ್ಯ ಪಾಲೆಂ ಇನ್ಸ್‌ ಪೆಕ್ಟರ್ ರಾಮಕೃಷ್ಣ ತಿಳಿಸಿದ್ದಾರೆ.

ಸಿಬ್ಬಂದಿ ತಕ್ಷಣ ಅಂಗಡಿಯಿಂದ ಓಡಿಹೋಗಿ ಪ್ರಾಣ ಉಳಿಸಿಕೊಂಡರು. ಅಂಗಡಿಯಲ್ಲಿದ್ದ ಮದ್ಯ ಸೇರಿ ಎಲ್ಲವೂ ಸುಟ್ಟುಹೋಗಿದೆ. ಕಂಪ್ಯೂಟರ್ ಮತ್ತು ಪ್ರಿಂಟರ್ ಸೇರಿದಂತೆ 1.5 ಲಕ್ಷ ಮೌಲ್ಯದ ಆಸ್ತಿಗಳು ಸುಟ್ಟುಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಇನ್ಸ್‌ ಪೆಕ್ಟರ್ ರಾಮ ಕೃಷ್ಣ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read