ಹೈವೇಯಲ್ಲಿ ಆಕ್ಸೆಲ್ ಕಟ್ ಆಗಿ ಸರ್ವಿಸ್ ರಸ್ತೆಗೆ ನುಗ್ಗಿದ ಮಿನಿ ಬಸ್: ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗಾಯ

ಮಂಡ್ಯ: ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಆಕ್ಸೆಲ್ ಕಟ್ ಆಗಿ ಎಕ್ಸ್ ಪ್ರೆಸ್ ವೇ ಯಿಂದ ಸರ್ವಿಸ್ ರಸ್ತೆಗೆ ಬಸ್ ನುಗ್ಗಿದೆ.

ಮಂಡ್ಯ ನಗರದ ಸ್ಯಾಂಜೋ ಆಸ್ಪತ್ರೆಯ ಎದುರು ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ತೆರಳುತ್ತಿದ್ದ ಮಿನಿ ಬಸ್ ಆಕ್ಸೆಲ್ ಕಟ್ ಆಗಿ ಏಕಾಏಕಿ ಸರ್ವಿಸ್ ರಸ್ತೆಗೆ ನುಗ್ಗಿದೆ. ಸರ್ವಿಸ್ ರಸ್ತೆಯ ಚರಂಡಿಗೆ ಕುಸಿದು ಮಿನಿ ಬಸ್ ನಲ್ಲಿದ್ದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬೆಂಗಳೂರಿನ ಕೆಂಗೇರಿಯಿಂದ ಶಬರಿಮಲೆಗೆ ಭಕ್ತರು ತೆರಳುತ್ತಿದ್ದರು. ಗಾಯಗೊಂಡ ಭಕ್ತರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read