ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ಇಂದು ಬಂದ್ ಕರೆ: ಮಂಡ್ಯ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗಿ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ಮಂಡ್ಯ ನಗರ ಮತ್ತು ಮದ್ದೂರು ತಾಲೂಕು ಬಂದ್ ಗೆ ಕರೆ ನೀಡಿವೆ. ಮಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.

ತಮಿಳುನಾಡಿಗೆ 5 ಸಾವಿರ ಕ್ಯುಸೆಕ್ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದ್ದು, ಈ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಶನಿವಾರ ಮಂಡ್ಯ ನಗರ ಮತ್ತು ಮದ್ದೂರು ತಾಲ್ಲೂಕು ಬಂದ್ ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದ ಬಂದ್ ಗೆ ಬೆಂಬಲ ನೀಡಿದೆ. ಬಹುತೇಕ ವಾಣಿಜ್ಯ ಚಟುವಟಿಕೆ ಸ್ಥಗಿತವಾಗುವ ಸಾಧ್ಯತೆ ಇದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read