BIG BREAKING: ಮಂಡ್ಯ ವಿಸಿ ನಾಲೆಗೆ ಕಾರ್ ಬಿದ್ದು ಘೋರ ದುರಂತ: ಐವರು ಜಲ ಸಮಾಧಿ

ಮಂಡ್ಯ: ವಿಸಿ ನಾಲೆಗೆ ಬಿದ್ದಿದ್ದ ಸ್ವಿಫ್ಟ್ ಕಾರ್ ನಲ್ಲಿ ಐವರು ಜಲ ಸಮಾಧಿಯಾಗಿದ್ದಾರೆ. ಬಿಳಿ ಬಣ್ಣದ ಸ್ವಿಫ್ಟ್ ಕಾರ್ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಿವಾಸಿ ಚಂದ್ರಪ್ಪ ಅವರಿಗೆ ಸೇರಿದೆ.

ಕ್ರೇನ್ ಮೂಲಕ ನಾಲೆಯಿಂದ ಕಾರ್ ಹೊರ ತೆಗೆಯಲಾಗಿದೆ. ರಸ್ತೆ ತಿರುವಿನಲ್ಲಿ ವೇಗವಾಗಿ ಬಂದು ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರ್ ನಂತರ ವಿಸಿ ನಾಲೆಗೆ ಬಿದ್ದಿದೆ. ಪಾಂಡವಪುರದಿಂದ ನಾಗಮಂಗಲಕ್ಕೆ ಹೋಗುವ ವೇಳೆ ದುರಂತ ಸಂಭವಿಸಿದೆ.

ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು, ಸ್ಥಳೀಯರು ಕಾರ್ಯಾಚರಣೆ ನಡೆಸಿ ವಿಸಿ ನಾಲೆಯಿಂದ ಕಾರ್ ಹೊರ  ತೆಗೆದಿದ್ದಾರೆ. ಕಾರ್ ನಲ್ಲಿ ಐವರ ಮೃತದೇಹ ಪತ್ತೆಯಾಗಿವೆ.

ಮಂಡ್ಯ ಜಿಲ್ಲೆ ಪಾಂಡವಪುರ ಸಮೀಪದ ಬನಘಟ್ಟದಲ್ಲಿ ದುರಂತ ಸಂಭವಿಸಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read