2 ವರ್ಷದ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದಿದ್ದ ಬಿಜೆಪಿ ಕಾರ್ಯಕರ್ತ ವಶಕ್ಕೆ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್…?

ಮಂಡ್ಯ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕೀಯಕ್ಕೆ ಕಾಂಗ್ರೆಸ್ ಮುಂದಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

2022 ರಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತ ರವಿ ಅವರನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2022 ಡಿಸೆಂಬರ್ 22 ರಂದು ಮಂಡ್ಯದ ಸಂಜಯ ವೃತ್ತದಲ್ಲಿ  ಅಂದಿನ ಪಾಕಿಸ್ತಾನ ವಿದೇಶಾಂಗ ಮಂತ್ರಿ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗಿದ್ದು, ಘೋಷಣೆ ಕೂಗುವಾಗ ಕಾರ್ಯಕರ್ತ ರವಿ ಪಾಕಿಸ್ತಾನ ಜಿಂದಾಬಾದ್ ಎಂದು ಬಾಯಿ ತಪ್ಪಿ ಹೇಳಿದ್ದರು.

ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಅರವಿಂದ ಕೈಯಿಂದ ರವಿ ಬಾಯಿ ಮುಚ್ಚಿದ್ದರು. ಎರಡು ವರ್ಷಗಳ ನಂತರ ರವಿ ವಿರುದ್ಧ ಕಾಂಗ್ರೆಸ್ ನಿಂದ ದೂರು ದಾಖಲಿಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಹನಿಂಬಾಡಿ ಕುಮಾರ್ ದೂರು ದಾಖಲಿಸಿದ್ದಾರೆ. ಅವರ ದೂರಿನ ಅನ್ವಯ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಕೇಸು ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read