BIG NEWS: ಬಿರುಗಾಳಿ ಮಳೆಗೆ ಮರ ಬಿದ್ದು ಮತ್ತೊಂದು ದುರಂತ: ಮಹಿಳೆ ಸಾವು

ಮಂಗಳೂರು: ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ. ಬಿರುಗಾಳಿ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಬಿರುಗಾಳಿ ಮಳೆಯಿಂದಾಗಿ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ಕಾರವಾರದಲ್ಲಿ ಗಾಳಿ ಮಳೆಯ ಪರಿಣಾಮ ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರು. ಈ ಘಟನೆ ಮಾಸುವ ಮುನ್ನವೇ ಇದೀಗ ಇಂತದ್ದೇ ಮತ್ತೊಂದು ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

ಭಾರಿ ಗಾಳಿಯಿಂದಾಗಿ ಮಹಿಳೆಯ ಮೇಲೆಯೇ ಮರಬಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಚಿತ್ರಪ್ಪಾಡಿಯಲ್ಲಿ ಈ ದುರಂತ ಸಂಭವಿಸಿದೆ. ರುಕ್ಮಿಣಿ (62) ಮೃತ ಮಹಿಳೆ. ಮನೆಯಲ್ಲಿ ಒಬ್ಬರೇ ಇದ್ದರು. ಮನೆಯ ಹೊರಗಡೆ ಮುಂಜಾನೆ ಕೆಲಸ ಮಾಡುತ್ತಿದ್ದಾಗ ಮರ ಬಿದ್ದು ಮರದ ಕೆಳಗೆ ಸಿಲುಕಿ ರುಕ್ಮುಣಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read