ಮತ್ತೆ ನೈತಿಕ ಪೊಲೀಸ್ ಗಿರಿ: ದೇವಾಲಯ ಬಳಿ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕರು, ಯುವತಿಯರನ್ನು ತಡೆದ ಹಿಂದೂ ಕಾರ್ಯಕರ್ತರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಾಲಯದ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಭಿನ್ನ ಕೋಮಿನ ವಿದ್ಯಾರ್ಥಿಗಳನ್ನು ಹಿಂದೂ ಕಾರ್ಯಕರ್ತರು ತಡೆದಿದ್ದಾರೆ.

ಉಳ್ಳಾಲದ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದರು. ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ, ಓರ್ವ ಮುಸ್ಲಿಂ ಯುವಕ ಸೋಮೇಶ್ವರ ದೇವಸ್ಥಾನದ ಬಳಿ ಸುತ್ತಾಡುತ್ತಿದ್ದರು. ಮುಸ್ಲಿಂ ಯುವಕ ಹಣೆಗೆ ಗಂಧ ಹಚ್ಚಿಕೊಂಡಿರುವುದನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಅನ್ಯಕೋಮಿನ ಯುವಕ, ಯುವತಿಯರು ಒಟ್ಟಿಗೆ ಬಂದಿರುವುದನ್ನು ಗಮನಿಸಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕರು, ಯುವತಿಯರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read