ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್; ಖತರ್ನಾಕ್ ಆರೋಪಿಗಳು ಅರೆಸ್ಟ್

ಮಂಗಳೂರು: ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಮಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಮುರ್ಜಾಪುರ ಮೂಲದ ಅಭಯ್ ರಾಜ್ (26) ಹಾಗೂ ಹರಿಶಂಕರ್ ಗಿರಿ (25) ಬಂಧಿತರು. ಸೆ.28ರಂದು ಮಂಗಳೂರು-ಸುರತ್ಕಲ್ ಮಾರ್ಗದ ರೈಲಿನಲ್ಲಿ ಸಂಭವಿಸಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಮೇಲೆ ರೈಲ್ವೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಕಳ್ಳರ ಕೈಚಳಕ ಬಯಲಾಗಿದೆ.

ಯುಪಿಯಿಂದ ವಿಮಾನದಲ್ಲಿ ಆಗಮಿಸುತ್ತಿದ್ದ ಕಳ್ಳರು ರಾತ್ರಿ ವೇಳೆ ಕೊಂಕಣ ರೈಲ್ವೆ, ಕೇರಳ, ಕರ್ನಾಟಕ ಭಾಗದ ರೈಲುಗಳಲ್ಲಿ ಪ್ರಯಾಣಿಕರ ಚಿನ್ನಾಭರಣ, ಹಣ ದೋಚಿ ಪರಾರಿಯಾಗುತ್ತಿದ್ದರು. ವಿಮಾನದಲ್ಲಿಯೇ ಬಂದು ವಿಮಾನದಲ್ಲಿಯೇ ಹಿಂತಿರುಗುತ್ತಿದ್ದರು ಈ ಹೈಟೆಕ್ ಕಳ್ಳರು. ಸಧ್ಯ ಬಂಧಿತ ಆರೋಪಿಗಳಿಂದ 125 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read