ಮಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಆರೋಪಿ ಹತ್ಯೆ

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ ಮಾಡಿದ ಘಟನೆ ಮಂಗಳೂರು ಹೊರವಲಯದ ತೊಕ್ಕಟ್ಟು ಕಲ್ಲಾಪು ಎಂಬಲ್ಲಿ ನಡೆದಿದೆ.

ಉಳ್ಳಾಲದ ಕಡಪ್ಪರ ಸಮೀರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇಲಿಯಾಸ್ ಹತ್ಯೆ ಪ್ರಕರಣದಲ್ಲಿ ಸಮೀರ್ ಆರೋಪಿಯಾಗಿದ್ದಾನೆ. ತಾಯಿ ಜೊತೆಗೆ ಹೋಟೆಲ್ ಗೆ ಊಟಕ್ಕೆ ಬಂದಿದ್ದಾಗ ಸಮೀರ್ ನನ್ನು ಕೊಲೆ ಮಾಡಲಾಗಿದೆ.

ಸಮೀರ್ ನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸಮೀರ್ ವಾರದ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಸಮೀರ್ ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read