ಮಹಾಭಾರತ, ರಾಮಾಯಣಕ್ಕಿಂತ ʻಮನ್ ಕಿ ಬಾತ್ʼ ಕಾರ್ಯಕ್ರಮ ಹೆಚ್ಚು ಜನಪ್ರಿಯ: ತ್ರಿಪುರಾ ಸಿಎಂ ಸಹಾ ಹೇಳಿಕೆ

ನವದೆಹಲಿ: 1980 ರ ದಶಕದ ಟಿವಿ ಧಾರಾವಾಹಿಗಳಾದ ‘ಮಹಾಭಾರತ’ ಮತ್ತು ‘ರಾಮಾಯಣ’ಕ್ಕಿಂತ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮವು ಜನಸಾಮಾನ್ಯರಲ್ಲಿ ಹೆಚ್ಚು ಜನಪ್ರಿಯವಾಗಿದೆ ಎಂದು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಭಾನುವಾರ ಹೇಳಿದ್ದಾರೆ.

ತಮ್ಮ ತವರು ಕ್ಷೇತ್ರ ‘ಟೌನ್ ಬರ್ಡೋವಾಲಿ’ಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ‘ಮನ್ ಕಿ ಬಾತ್’ ನ 108 ನೇ ಸಂಚಿಕೆಯನ್ನು ಆಲಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

ನಮ್ಮ ತಾಯಂದಿರು ಮತ್ತು ಸಹೋದರಿಯರು ಪ್ರತಿ ಭಾನುವಾರ ದೂರದರ್ಶನದಲ್ಲಿ ‘ಮಹಾಭಾರತ’ ಮತ್ತು ‘ರಾಮಾಯಣ’ದ ಮುಂದುವರಿದ ಭಾಗಗಳನ್ನು ವೀಕ್ಷಿಸಲು ದೂರದರ್ಶನಕ್ಕೆ ಓಡುವುದನ್ನು ನಾವು ನೋಡುತ್ತಿದ್ದೆವು. ಇತ್ತೀಚಿನ ದಿನಗಳಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರು ಪ್ರತಿ ತಿಂಗಳ ಕೊನೆಯ ಭಾನುವಾರ ಪ್ರಸಾರವಾಗುವ ಪ್ರಧಾನ ಮಂತ್ರಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಕೇಳಲು ಧಾವಿಸುವುದನ್ನು ನಾವು ನೋಡುತ್ತೇವೆ. ಈ ಕಾರ್ಯಕ್ರಮವು 1980  ರ ದಶಕದಲ್ಲಿ ದೂರದರ್ಶನದಲ್ಲಿ ಪ್ರಸಾರವಾದ ಧಾರಾವಾಹಿಗಳಿಗಿಂತ ಹೆಚ್ಚು ಜನಪ್ರಿಯವಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read