ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಗುಡ್ ನ್ಯೂಸ್: ಇಳಿಕೆಯಾದ ಈರುಳ್ಳಿ ದರ

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೂರು ದಿನದಿಂದ ಯಶವಂತಪುರ ಎಪಿಎಂಸಿಗೆ ಈರುಳ್ಳಿ ಪೂರೈಕೆ ಹೆಚ್ಚಾಗಿದ್ದು, ಏರುಗತಿಯಲ್ಲಿದ್ದ ಈರುಳ್ಳಿ ಬೆಲೆ ಕೊಂಚ ಕಡಿಮೆಯಾಗಿದೆ. ಈರುಳ್ಳಿ ಪೂರೈಕೆ ಇದೇ ರೀತಿ ಮುಂದುವರೆದರೆ ಮೂರ್ನಾಲ್ಕು ದಿನಗಳಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿಯೂ ಈರುಳ್ಳಿ ದರ ಕಡಿಮೆಯಾಗಲಿದೆ.

ಕಳೆದ ಒಂದು ತಿಂಗಳಿಂದ ಯಶವಂತಪುರ ಎಪಿಎಂಸಿಗೆ 50 ಕೆಜಿಯ ಸುಮಾರು 60 ಸಾವಿರ ಚೀಲ ಬರುತ್ತಿತ್ತು. ಹೀಗಾಗಿ ಈರುಳ್ಳಿ ಸಗಟು ದರ ಕೆಜಿಗೆ 60 ರಿಂದ 70 ರೂಪಾಯಿವರೆಗೆ ಏರಿಕೆಯಾಗಿತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 100 ರೂ ದಾಟಿತ್ತು.

ಕಳೆದ ಮೂರು ನಾಲ್ಕು ದಿನಗಳಿಂದ ಈರುಳ್ಳಿ ಪೂರೈಕೆ ಹೆಚ್ಚಾಗಿದೆ. ಸುಮಾರು 80,000 ಚೀಲ ಮಾರುಕಟ್ಟೆಗೆ ಬರುತ್ತಿದ್ದು, ಸಗಟು ದರ ಕೆಜಿಗೆ 50 ರಿಂದ 55 ರೂ. ಆಗಿದೆ. ನಿರಂತರವಾಗಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಪೂರೈಕೆ ಆದಲ್ಲಿ ಮೂರ್ನಾಲ್ಕು ದಿನಗಳಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿಯೂ ದರ ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read