BREAKING: ಮದುವೆ ಮಂಟಪದಲ್ಲಿ ಚಿನ್ನ ಕದಿಯುವಾಗಲೇ ಸಿಕ್ಕಿಬಿದ್ದ ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿತ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಮದುವೆ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ ನೀಡಲಾಗಿದೆ.

ಸಾಯಿಕೃಷ್ಣ ಫಂಕ್ಷನ್ ಹಾಲ್ ನಲ್ಲಿ ಘಟನೆ ನಡೆದಿದೆ. ಚಿನ್ನದ ಸರ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳನನ್ನು ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆಂಧ್ರಪ್ರದೇಶದ ಮುಲ್ಲಾಮೋತಕಪಲ್ಲಿ ಗ್ರಾಮದ ನರೇಶನನ್ನು ಥಳಿಸಲಾಗಿದ್ದು, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಗೌರಿಬಿದನೂರು ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read