BREAKING : ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ : 2 ನೇ ತರಗತಿ ವಿದ್ಯಾರ್ಥಿ ಸಜೀವ ದಹನ.!

ಕೊಡಗು : ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ.

ಕಾಟಕೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ.

ಇಂದು ಮುಂಜಾಜೆ 4-5 ಗಂಟೆ ಸುಮಾರಿಗೆ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾಲೆಯ ವಸತಿ ಗೃಹದಲ್ಲಿ ಒಟ್ಟು 53 ಮಂದಿ ನೆಲೆಸಿದ್ದರು. ಆದರೆ ಓರ್ವ ಬಾಲಕ ಮಾತ್ರ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾನೆ. ಬಾಲಕ 2 ನೇ ತರಗತಿಯಲ್ಲಿ ಓದುತ್ತಿದ್ದನು. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read