BREAKING: ‘ಪ್ರಜಾ ಧ್ವನಿ’ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮೊಬೈಲ್ ಕಳವು

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಜಾ ಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ಮೊಬೈಲ್ ಕಳವು ಮಾಡಲಾಗಿದೆ.

ಎಂ.ಬಿ. ಪಾಟೀಲ್ ಅವರು ಮೊಬೈಲ್ ಕಳೆದುಕೊಂಡು ಪೇಚಿಗೆ ಸಿಲುಕಿದ್ದಾರೆ. ಐಫೋನ್ ಕಳೆದು ಹೋಗಿರುವ ಬಗ್ಗೆ ವೇದಿಕೆಯಲ್ಲಿ ಅನೌನ್ಸ್ ಮೆಂಟ್ ಮಾಡಲಾಗಿದೆ. ಯಾರಿಗಾದರೂ ಮೊಬೈಲ್ ಸಿಕ್ಕರೆ ಕೂಡಲೇ ತಲುಪಿಸಿ ಎಂದು ಮನವಿ ಮಾಡಲಾಗಿದೆ. ಅದರಲ್ಲಿ ನೀರಾವರಿ ಇಲಾಖೆ, ಕೆಪಿಸಿಸಿಗೆ ಸಂಬಂಧಿಸಿದ ದಾಖಲೆಗಳು ಇವೆ. ಕೂಡಲೇ ಮೊಬೈಲ್ ತಲುಪಿಸಿ ಎಂದು ಎಂ.ಬಿ. ಪಾಟೀಲ್ ಮನವಿ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read