ಯುವತಿ ಚುಡಾಯಿಸಿದವರನ್ನು ಪ್ರಶ್ನಿಸಿದ್ದಕ್ಕೆ ಯೋಧನ ಮೇಲೆ ಮಾರಣಾಂತಿಕ ಹಲ್ಲೆ | Video

ಉತ್ತರ ಪ್ರದೇಶದ ಮೀರತ್‌ನಲ್ಲಿ ಯುವತಿಯರನ್ನು ಚುಡಾಯಿಸಿದವರನ್ನು ಪ್ರಶ್ನಿಸಿದ್ದಕ್ಕೆ ಯೋಧನೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಮೀರತ್‌ನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರೊವಿನ್ಷಿಯಲ್ ಆರ್ಮ್ಡ್ ಕಾನ್ಸ್‌ಟಾಬ್ಯುಲರಿ (PAC) ಯೋಧ ಆಯುಷ್ ತನ್ನ ಗೆಳತಿಯ ಹುಟ್ಟುಹಬ್ಬವನ್ನು ಆಚರಿಸಲು ತನ್ನ ಸಹೋದರನೊಂದಿಗೆ ಬಂದಿದ್ದರು. ಪಾರ್ಟಿಯ ಸಮಯದಲ್ಲಿ, ಕೆಲವು ಯುವಕರು ಹುಡುಗಿಯರಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದು, ಇದನ್ನು ಆಯುಷ್ ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಯುವಕರು ಆಯುಷ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಆಯುಷ್‌ನ ಕಾರನ್ನು ಧ್ವಂಸಗೊಳಿಸಿದ್ದಾರೆ.

ಈ ಘಟನೆಯಲ್ಲಿ ಆಯುಷ್ ತಲೆಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ಆಯುಷ್ ಹೇಗೋ ತನ್ನ ಕಾರನ್ನು ಪೊಲೀಸ್ ಠಾಣೆಗೆ ಓಡಿಸಿ ಅಲ್ಲಿ ಹಲ್ಲೆ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ವಿಡಿಯೋ ವೈರಲ್ ಆದ ನಂತರ, ಮೀರತ್ ಪೊಲೀಸರು ಎಕ್ಸ್‌ನಲ್ಲಿ ಹೇಳಿಕೆ ನೀಡಿದ್ದು “ಥಾನಾ ನೌಚಂಡಿ ಅಡಿಯಲ್ಲಿ ಸೆಂಟ್ರಲ್ ಮಾರ್ಕೆಟ್ ಪ್ರದೇಶದಲ್ಲಿ, ಕೆಲವು ಯುವಕರು ಹುಟ್ಟುಹಬ್ಬದ ಪಾರ್ಟಿಯನ್ನು ಆಚರಿಸಲು ಬಂದಿದ್ದರು, ಈ ಸಮಯದಲ್ಲಿ ಜಗಳ ಸಂಭವಿಸಿದೆ. ಇದರಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಪರಸ್ಪರ ತಿಳಿದಿದ್ದರು. ಸಂತ್ರಸ್ತನ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲು ತಂಡವನ್ನು ನೇಮಿಸಲಾಗಿದೆ. ಸಂತ್ರಸ್ತರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ” ಎಂದು ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳನ್ನು ಚುಡಾಯಿಸುವುದನ್ನು ಮತ್ತು ಇಂತಹ ಹಿಂಸಾತ್ಮಕ ದಾಳಿಗಳನ್ನು ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read