ನಿರ್ಬಂಧದ ನಡುವೆಯೂ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ; ವಿದ್ಯಾರ್ಥಿಗಳ ಅರೆಸ್ಟ್‌

ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿದ್ದ ಭಾರತೀಯ ರಾಷ್ಟ್ರ ಸಮಿತಿಯ ವಿದ್ಯಾರ್ಥಿಗಳ ವಿಭಾಗದ ಸದಸ್ಯರನ್ನು ಹೈದರಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಈ ಘಟನೆ ನಡೆದಿದೆ.

ಬಿಆರ್‌ಎಸ್ ವಿದ್ಯಾರ್ಥಿಗಳ ವಿಭಾಗದ ಸದಸ್ಯರು ಉಸ್ಮಾನಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಆರ್ಟ್ಸ್ ಕಾಲೇಜಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನಕ್ಕಾಗಿ ಜಮಾಯಿಸಿದ್ದರು. ಹೈದರಾಬಾದ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಕ್ರೀನಿಂಗ್ ನಿಲ್ಲಿಸಿದರು. ನಂತರ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಉಸ್ಮಾನಿಯಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಗೆ ರವಾನಿಸಿದ್ದಾರೆ.

ಸೋಮವಾರ, ತಮಿಳುನಾಡಿನ ನಾಗಪಟ್ಟಣಂನಲ್ಲಿ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಸಾರ್ವಜನಿಕ ಪ್ರದರ್ಶನದ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆಯಿತು. ಈ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುಮಾರು 50 ಪೊಲೀಸರನ್ನು ನಿಯೋಜಿಸಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read