BIG NEWS: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ವಂಚನೆ: ಆರೋಪಿ ಅರೆಸ್ಟ್

ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ಮಹಿಳೆಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಂತೋಷ್ ಬಂಧಿತ ಆರೋಪಿ. ಮೈಕ್ರೋ ಫೈನಾನ್ಸ್ ಕಂಪನಿ ಮ್ಯಾನೇಜರ್ ಎಂದು ಹೇಳಿಕೊಂಡು ಆರೋಪಿ ಸಂತೋಷ್ ಮಹಿಳೆಗೆ 4 ಲಕ್ಷ ರೂಪಾಯಿ ವಂಚಿಸಿದ್ದ. ಹಳೇ ಲೋನ್ ಕ್ಲೀಯರ್ ಮಾಡಿದರೆ 10 ಲಕ್ಷ ಲೋನ್ ನೀಡುವುದಾಗಿ ನಂಬಿಸಿದ್ದ.

ಸಂತೋಷ್ ಮಾತು ಕೇಳಿ ಮಹಿಳೆ 4 ಲಕ್ಷ ರೂಪಾಯಿ ಹಣವನ್ನು ನೀಡಿದ್ದರು. ಆದರೆ ಆರೋಪಿ ಮೈಕ್ರೋ ಫೈನಾನ್ಸ್ ಸಾಲ ಕ್ಲೀಯರ್ ಮಾಡದೇ ಎಸ್ಕೇಪ್ ಆಗಿದ್ದ. ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಮಹಿಳೆ ಕುಟುಂಬ ಸಮೇತ ಮನೆ ಬಿಟ್ಟು ಹೋಗಿದ್ದರು. ಪ್ರಕರಣ ಸಂಬಂಧ ಚಿಕ್ಕಮಗಳೂರು ಪೊಲೀಸರು ಆರೋಪಿ ಸಂತೋಷ್ ನನ್ನು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read