ಹೈನುಗಾರರಿಗೆ ಸಿಹಿ ಸುದ್ದಿ: ಹಾಲಿಗೆ ಮತ್ತೆ 5 ರೂ. ಪ್ರೋತ್ಸಾಹಧನ

ಮೈಸೂರು: ಹಾಲಿಗೆ ಮತ್ತೆ 5 ರೂಪಾಯಿ ಪ್ರೋತ್ಸಾಹ ಧನ ನೀಡುವ ಉದ್ದೇಶವಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಈ ಬಗ್ಗೆ ಮಾಹಿತಿ ನೀಡಿ, ಈಗಾಗಲೇ ಸರ್ಕಾರದಿಂದ 5 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದ್ದು, ಹೈನುಗಾರಿಕೆ ವೆಚ್ಚ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ಲೀಟರ್ ನೀಡುವ 5 ರೂ. ಚಿಂತನೆ ಇದೆ. ಮಂಗಳವಾರ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲು ಖರೀದಿ ಮತ್ತು ಮಾರಾಟ ದರ ಕಡಿಮೆ ಇದ್ದು, ಹಾಲು ಉತ್ಪಾದಕರಿಗೆ ನೆರವಾಗಬೇಕಿದೆ. ಹೀಗಾಗಿ ಹೈನುಗಾರರು ಮತ್ತು ಗ್ರಾಹಕರಿಗೆ ಹೊರೆಯಾಗದಂತೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read