ಶಾಲೆಯಲ್ಲಿ ಹಾಲಿನ ಪೌಡರ್ ಕದ್ದ ಮುಖ್ಯ ಶಿಕ್ಷಕ ಅಮಾನತು

ಕಲಬುರಗಿ: ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಾಲಿನ ಪೌಡರ್ ಪ್ಯಾಕೆಟ್ ಗಳನ್ನು ಕದ್ದೊಯ್ದ ಆರೋಪದ ಮೇಲೆ ಮುಖ್ಯ ಶಿಕ್ಷಕ ಖಾಜಪ್ಪ ದೊಡ್ಮನಿ ಅವರನ್ನು ಅಮಾನತು ಮಾಡಲಾಗಿದೆ.

ಶಾಲೆಯಲ್ಲಿ ಮಕ್ಕಳಿಗೆ ವಿತರಿಸುವ ಹಾಲಿನ ಪೌಡರ್ ಪ್ಯಾಕೆಟ್ ಗಳನ್ನು ಖಾಜಪ್ಪ ದೊಡ್ಮನಿ ಕದ್ದು ಮನೆಗೆ ಸಾಗಿಸುವಾಗ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಪಾಟೀಲ ಅವರು ಈ ಬಗ್ಗೆ ಪರಿಶೀಲನೆಗಾಗಿ ಅಕ್ಷರ ದಾಸೋಹ ತಾಲೂಕು ಅಧಿಕಾರಿ ಸೇರಿ ನಾಲ್ವರು ಅಧಿಕಾರಿಗಳ ತಂಡ ರಚಿಸಿದ್ದರು.

ಈ ಸಮಿತಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದು, ಡಿಡಿಪಿಐ ವರದಿ ಪಡೆದು, ಮೇಲ್ನೋಟಕ್ಕೆ ಕರ್ತವ್ಯ ನಿರ್ಲಕ್ಷ್ಯ, ಹಾಲಿನ ಪೌಡರ್ ಪಾಕೆಟ್ ಗಳನ್ನು ಶಾಲೆಯಿಂದ ಹೊರಗೆ ಸಾಗಿಸುವಲ್ಲಿ ಮುಖ್ಯ ಶಿಕ್ಷಕ ಖಾಜಪ್ಪ ಅವರ ಪಾತ್ರ ಕಂಡುಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read