ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ 2 ರೂ. ಕಡಿತಗೊಳಿಸಿ ಆದೇಶ

ಬೆಂಗಳೂರು: ರಾಜ್ಯೋತ್ಸವ ದಿನವೇ ಹಾಲು ಉತ್ಪಾದಕರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್ ಗೆ ಎರಡು ರೂ. ಕಡಿತಗೊಳಿಸಿ ಬೆಂಗಳೂರು ಹಾಲು ಒಕ್ಕೂಟ ಆದೇಶ ಹೊರಡಿಸಿದೆ. ಇದರಿಂದಾಗಿ ಹಾಲು ಉತ್ಪಾದಕರಿಗೆ ನಷ್ಟವಾಗಲಿದೆ.

ಬರ ಪರಿಸ್ಥಿತಿಯಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಹಾಲು ಉತ್ಪಾದಕ ರೈತರಿಗೆ ಹಾಲಿನ ದರ ಕಡಿತಗೊಳಿಸಿ ಶಾಕ್ ನೀಡಲಾಗಿದೆ. ರೈತರಿಂದ ಬೆಂಗಳೂರು ಹಾಲು ಒಕ್ಕೂಟ ಖರೀದಿಸುವ ಪ್ರತಿ ಲೀಟರ್ ಹಾಲಿಗೆ ಅಕ್ಟೋಬರ್ 31ರವರೆಗೆ ಶೇಕಡ 4 ಫ್ಯಾಟ್, 8.5 ಸಾಂದ್ರತೆ ಇದ್ದಲ್ಲಿ 34.15 ರೂ. ದರ ನಿಗದಿ ಮಾಡಲಾಗಿತ್ತು. ನವೆಂಬರ್ 1ರಿಂದ ಇದೇ ಗುಣಮಟ್ಟದ ಹಾಲಿಗೆ 32.15 ರೂ. ದರ ನಿಗದಿಪಡಿಸಲಾಗಿದೆ.

ಜುಲೈನಲ್ಲಿ ಹಾಲಿನ ದರ ಪರಿಷ್ಕರಣೆ ಮಾಡಿದ್ದ ರಾಜ್ಯ ಸರ್ಕಾರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿ ಇದನ್ನು ರೈತರಿಗೆ ನೀಡುವಂತೆ ಸೂಚಿಸಿತ್ತು. ಎರಡೇ ತಿಂಗಳಲ್ಲಿ ದರ ಇಳಿಕೆ ಮಾಡುವ ಮೂಲಕ ಸರ್ಕಾರ ಕೊಟ್ಟಿದ್ದ ಹೆಚ್ಚಿನ ದರವನ್ನು ಒಕ್ಕೂಟ ರೈತರಿಂದ ಕಸಿದುಕೊಂಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ 1.10 ಲಕ್ಷ ರೈತರಿಗೆ ನಷ್ಟವಾಗಲಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read