ರಮೇಶ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಬೆಳಗಾವಿ: ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಆಪ್ತ, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕ್ರಣಕ್ಕೆ ಸಂಬಂಧಿಸಿದಂತೆ ಸಚಿವೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಪೃಥ್ವಿ ಸಿಂಗ್ ಮೋಸ್ಟ್ ಬೋಗಸ್. ಚಾಕು ಇರಿತದ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು. ಅವನು ಯಾರ ಆಪ್ತ ಅನ್ನೋದಕ್ಕಿಂತ ನಮ್ಮ ಹೆಸರು ಬಂದಿದೆ. ನಮ್ಮ ಹೆಸರು ಬಂದ ತಕ್ಷಣ ಅದರ ಬಗ್ಗೆ ವಿಚಾರ ಮಾಡಿದ್ದೇನೆ. ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ನನ್ನು ವಿಚಾರಣೆ ಮಾಡಬೇಕು. ಪ್ರಕರಣದ ಬಗ್ಗೆ 24ಗಂಟೆಯೊಳಗೆ ಸತ್ಯಾಸತ್ಯತೆ ಗೊತ್ತಾಗಬೇಕು. ರಾಜಕೀಯ ಪ್ರೇರಿತವೋ ಅಥವಾ ಷಡ್ಯಂತ್ರವೋ ಎನ್ನುವುದು ತಿಳಿಯಬೇಕು ಎಂದು ಹೇಳಿದ್ದಾರೆ.

ನಾನು, ತಮ್ಮ, ಮಗ ಸೇರಿದಂತೆ ನಾವೆಲ್ಲರೂ ಶಾಂತಿ ಪ್ರಿಯರು. ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು ಎಸ್.ಪಿ. ಜೊತೆ ಮಾತನಾಡಿದ್ದೇನೆ. ಪೃಥ್ವಿ ಹೆಸರು ಬರೆದಿಟ್ಟು ಹುಡುಗರು ಆತ್ಮಹತ್ಯೆ ಮಾಡಿಕೊಂಡಿದ್ದರು. ಪೃಥ್ವಿ ಸಿಂಗ್ ಬೋಗಸ್ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read