BREAKING: ಸಚಿವ ಜಮೀರ್ ಅಹಮ್ಮದ್ ಗೆ ನಿಂದನೆ: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ಧರ್ಮ, ಜಾತಿಯ ಹೆಸರಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುನೀತ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ ಸಚಿವ ಜಮೀರ್ ಅಹ್ಮದ್ ಅವರನ್ನು ನಿಂದಿಸಿದ್ದರು. ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಈ ಕುರಿತಾಗಿ ದೂರು ನೀಡಿದ್ದರು.

ಪುನೀತ್ ಧರ್ಮ -ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಅವರ ಪಿಎಸ್ ದೂರು ನೀಡಿದ್ದು, ಇದನ್ನು ಆಧರಿಸಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಪುನೀತ್ ಅವರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಪುನೀತ್ ಕೆರೆಹಳ್ಳಿಯನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read