ಗುದ್ದಲಿ ಪೂಜೆಗೆ ಬಂದ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಿಸೇಗೌಡನದೊಡ್ಡಿಯಲ್ಲಿ ಘಟನೆ ನಡೆದಿದೆ. ಗ್ರಾಮದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಲು ಶಾಸಕರು ಹೋಗಿದ್ದಾರೆ. ಗುದ್ದಲಿ ಪೂಜೆಗೆ ಅವಕಾಶ ನೀಡದೆ ಗ್ರಾಮಸ್ಥರು ಶಾಸಕರನ್ನು ವಾಪಸ್ ಕಳುಹಿಸಿದ್ದಾರೆ.

ಈ ಹಿಂದೆ ಕ್ರಷರ್ ವಿಚಾರವಾಗಿ ಹಲವರ ವಿರುದ್ಧ ಶಾಸಕರು ಕೇಸ್ ದಾಖಲಿಸಿದ್ದರು. ಗ್ರಾಮದ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಶಾಸಕ ರಂಗನಾಥ್ ಅವರ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಗುದ್ದಲಿ ಪೂಜೆ ಮಾಡುವುದು ಬೇಕಿಲ್ಲವೆಂದು ಶಾಸಕರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಧ್ಯಪ್ರವೇಶಿಸಿದ ಹುಲಿಯೂರುದುರ್ಗ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read