ದೇಶದಲ್ಲಿ ಅಮಾಯಕ ಯೋಧರನ್ನು ಬಲಿಕೊಟ್ಟ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ : ಶಾಸಕ H.C ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ

ರಾಮನಗರ : ದೇಶದಲ್ಲಿ ಅಮಾಯಕ ಯೋಧರನ್ನು ಬಲಿಕೊಟ್ಟ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ಈ ಹೇಳಿಕೆ ನೀಡಿದ್ದಾರೆ. ಕಳೆದ ಭಾರಿ ಪುಲ್ವಾಮ ದಾಳಿಯಾಗದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮನೆಗೆ ಕಳುಹಿಸುತ್ತಿದ್ದರು. ಈ ಬಾರಿ ವಿಶ್ವಮಾನವ ಆಗಲು ಟಾಟಾ ಮಾಡುತ್ತಿದ್ದಾರೆ. ದೇಶದಲ್ಲಿ ಅಮಾಯಕ ಸೈನಿಕರನ್ನು ಬಲಿ ಕೊಟ್ಟಂತಹ ಕೀರ್ತಿ ಮೋದಿ ಸರಕಾರಕ್ಕೆ ಸಲ್ಲುತ್ತದೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸೈನಿಕರಿಗೆ ತೊಂದರೆ ಇದೆ, ಬಲಿದಾನವಾಗುತ್ತಿದೆ ಎಂದು ಅಮಿಶಾ ಗೆ ಗೊತ್ತಿಲ್ವಾ?. ಇದು ಮುಟ್ಟಾಳ ಸರಕಾರ ಬಲಿದಾನವಾಗಿದ್ದು ಸೈನಿಕರು, ಅಧಿಕಾರ ಬಂದಿದ್ದು ಮೋದಿಗೆ. ಈ ಬಗ್ಗೆ ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಪ್ರಧಾನಿ ವಿರುದ್ದ ಲೇವಡಿ ಮಾಡಿದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read