ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಖ್ಯ ಮಾಹಿತಿ: ನ.26 ರಿಂದ ಭದ್ರಾ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ

ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ:29.07.2024 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿದ್ದು, ನೀರನ್ನು ಹರಿಸುವ ಗರಿಷ್ಠ ಅವಧಿ 120 ದಿನಗಳು ದಿ:26.11.2024ಕ್ಕೆ ಪೂರ್ಣಗೊಳ್ಳಲಿದೆ.

ಆದ್ದರಿಂದ ದಿ:26.11.2024ರ ರಾತ್ರಿಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗುವುದು. ಭದ್ರಾ ಜಲಾಶಯದ ಅಚ್ಚುಕಟ್ಟುದಾರರು ನಿಗಮದೊಂದಿಗೆ ಸಹಕರಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read