ದಾವಣಗೆರೆ: ಕುಡಿಯಲು ಹಣ ನೀಡಿದ ಕಾರಣ ಪಾಪಿ ಪುತ್ರನೊಬ್ಬ ತಾಯಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ತಾಲೂಕು ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ದೊಣ್ಣೆಯಿಂದ ಹೊಡೆದು ರತ್ನಾಬಾಯಿ(62) ಅವರನ್ನು ಪುತ್ರ ಕೊಲೆ ಮಾಡಿದ್ದಾನೆ. ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದ ಪುತ್ರ ರಾಘವೇಂದ್ರ ನಾಯ್ಕ್ ಇದೇ ಕಾರಣಕ್ಕೆ ಹಣ ನೀಡುವಂತೆ ತಾಯಿಯನ್ನು ಪೀಡಿಸುತ್ತಿದ್ದ. ತಾಯಿ ಹಣ ಇಲ್ಲ ಎಂದು ಹೇಳಿದ್ದಕ್ಕೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಆರೋಪಿ ರಾಘವೇಂದ್ರ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.